ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ:
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರೀ ಮುನ್ನಡೆಯತ್ತ ಸಾಗುತ್ತಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ 78655 ಮತಗಳ ಅಂತರದಿಂದ ಭಾರಿ ಮುನ್ನಡೆ ಪಡೆದಿದ್ದ ಹಾಗೂ ಒಂಭತ್ತನೇ ಸುತ್ತಿನ ಮತ ಎಣಿಕೆಯಲ್ಲಿ 97,014 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇದೀಗ 12ನೇ ಸುತ್ತಿನ ಮತ ಎಣಿಕೆಯಲ್ಲಿ 4,64,692 ಮತಗಳನ್ನು ಪಡೆದು 1,16,990 ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದು ಪದ್ಮರಾಜ್ ಆರ್ ಪೂಜಾರಿ 3,52,251 ಮತಗಳನ್ನು ಪಡೆದು ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದ ಮೂಲಕ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಯತ್ತ ಸಾಗುತ್ತಿದ್ದು ಕಾಂಗ್ರೆಸ್ ಕಟ್ಟಿಕೊಂಡಿದ್ದ ಆಶಾ ಗೋಪುರ ಕುಸಿಯುವ ಹಂತಕ್ಕೆ ತಲುಪಿತೇ? ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ.
Post Comment