ದ್ವೇಷ ರಾಜಕೀಯ ವಿರೋಧಿಸಿ ಬಿಜೆಪಿಯಿಂದ ಜೂ:18ಕ್ಕೆ ಬೃಹತ್ ಪ್ರತಿಭಟನೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬೆಳ್ತಂಗಡಿ ಮಂಡಲದ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿಯಾಗಿ ನಡೆಯುತ್ತಿರುವ ದೌರ್ಜನ್ಯ ಹಾಗೂ ದ್ವೇಷ ರಾಜಕೀಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬೃಹತ್ ಪ್ರತಿಭಟನೆಯು ಜೂನ್ 18ನೇ ಮಂಗಳವಾರದಂದು ಬೆಳ್ತಂಗಡಿಯಲ್ಲಿ ನಡೆಯಲಿದೆ. ಮಂಗಳವಾರ ಪೂರ್ವಾಹ್ನ 10.00 ಗಂಟೆಗೆ ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಅಯ್ಯಪ್ಪ ಗುಡಿಯಿಂದ ಹೊರಡುವ ಪ್ರತಿಭಟನಾ ಮೆರವಣಿಗೆಯು ತಾಲೂಕು ಆಡಳಿತ ಸೌಧದ ಮುಂಭಾಗ ಸಮಾವೇಶಗೊಳ್ಳಲಿದೆ. ಪ್ರತಿಭಟನೆಯಲ್ಲಿ ತಾಲೂಕು ಹಾಗೂ ಜಿಲ್ಲೆಯ ಹಲವು ಮುಖಂಡರು ಭಾಗವಹಿಸಲಿದ್ದಾರೆ.
Post Comment