ಉಜಿರೆ : ಯುವವಾಹಿನಿ ಸಂಚಲನಾ ಸಮಿತಿ, ಶ್ರೀ ಗುರುನಾರಾಯಣ ಸೇವಾ ಸಂಘ ನೇತೃತ್ವದಲ್ಲಿ ಗುರುಪೂಜಾ ಕಾರ್ಯಕ್ರಮ  

ಉಜಿರೆ : ಯುವವಾಹಿನಿ ಸಂಚಲನಾ ಸಮಿತಿ, ಶ್ರೀ ಗುರುನಾರಾಯಣ ಸೇವಾ ಸಂಘ ನೇತೃತ್ವದಲ್ಲಿ ಗುರುಪೂಜಾ ಕಾರ್ಯಕ್ರಮ  

Share

ಶ್ರೀ ನಾರಾಯಣ ಗುರುಗಳು ಇಡೀ ಜಗತ್ತೇ ಸ್ವೀಕರಿಸಿದ ಮಹಾಗುರುಗಳು : ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ 

“ಜಾತಿ ಸಂಘಟನೆಗಳಿರುವುದು ಇತರ ಜಾತಿಗಳನ್ನು ತುಳಿಯುವುದಕ್ಕಲ್ಲ; ನಮ್ಮ ಅಭಿವೃದ್ಧಿಗಾಗಿ :  ಜಯವಿಕ್ರಮ ಕಲ್ಲಾಪು ಪ್ರತಿಪಾದನೆ 

IMG-20240630-WA0019-2-1024x624 ಉಜಿರೆ : ಯುವವಾಹಿನಿ ಸಂಚಲನಾ ಸಮಿತಿ, ಶ್ರೀ ಗುರುನಾರಾಯಣ ಸೇವಾ ಸಂಘ ನೇತೃತ್ವದಲ್ಲಿ ಗುರುಪೂಜಾ ಕಾರ್ಯಕ್ರಮ  

ಬೆಳ್ತಂಗಡಿ : ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವ  ಮೂಲಕ ಅನುಕಂಪದ ಮೂರ್ತಿಯಾಗಿದ್ದರು. ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು. ಆ ಮೂಲಕ ಇಡೀ ಜಗತ್ತಿನಿಂದ ಸ್ವೀಕರಿಸಲ್ಪಟ್ಟ  ಮಹಾಗುರುಗಳಾಗಿದ್ದರು. ಆದ್ದರಿಂದ ನಾವು ವಿದ್ಯೆ ಮತ್ತು ಸಂಘಟನೆಯ ಶಕ್ತಿಯ ಮೂಲಕ ರಾಜಕೀಯ ಶಕ್ತಿಯನ್ನೂ ಕೂಡ ಪಡೆದು ಸಮಾಜದಲ್ಲಿ ಗುರುತಿಸುವಂತಾಗಬೇಕು ಮತ್ತು ಸಂಕುಚಿತ ಮನೋಭಾವ ಬಿಟ್ಟು ಮುಂದೆ ಬರಬೇಕೆಂದು ಕೇರಳ ಶಿವಗಿರಿ ಮಠದ ಶ್ರೀ  ಸತ್ಯಾನಂದ ತೀರ್ಥ ಸ್ವಾಮೀಜಿಯವರು ಹೇಳಿದರು.

ಅವರು ಭಾನುವಾರ ಯುವ ವಾಹಿನಿ ಸಂಚಲನಾ ಸಮಿತಿ, ಉಜಿರೆ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಜಂಟಿ ನೇತೃತ್ವದಲ್ಲಿ ನಡೆದ ಗುರುಪೂಜಾ ಕಾರ್ಯಕ್ರಮ  ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಮಾತನಾಡಿ ಗುರುಪೂಜೆಯ ಮೂಲಕ ಗುರುಗಳ ತತ್ವ ಸಂದೇಶಗಳನ್ನು ಪ್ರಸಾರ ಮಾಡುವ ಉದ್ದೇಶ ಈಡೇರುತ್ತದೆ. ಜಾತಿ ಸಂಘಟನೆಗಳಿರುವುದು ಇತರ ಜಾತಿಗಳನ್ನು ತುಳಿಯುವುದಕ್ಕಲ್ಲ, ಬದಲಾಗಿ ನಮ್ಮ ಅಭಿವೃದ್ಧಿಗಾಗಿ ಎಂದು ಪ್ರತಿಪಾದಿಸಿದರು.

ಉಜಿರೆ ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಬರಮೇಲು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಜಿರೆ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬರಮೇಲು ಪ್ರಾಸ್ತಾವಿಕವಾಗಿ ಮಾತನಾಡಿ ಉಜಿರೆಯಲ್ಲಿ ಗುರುಮಂದಿರ ನಿರ್ಮಾಣ ಮಾಡುವ ನಮ್ಮ ಕನಸಿಗೆ  ಸಹಕಾರ ಕೋರಿದರು.                         ಅತಿಥಿಗಳಾಗಿ ವೇದಿಕೆಯಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ, ಉಜಿರೆ ಘಟಕದ ಕಿಶೋರ್ ಪೆರ್ಲ, ಯುವ ಬಿಲ್ಲವ ವೇದಿಕೆಯ ತಾಲ್ಲೂಕು ಅಧ್ಯಕ್ಷ ಎಂ.ಕೆ.ಪ್ರಸಾದ್, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ  ಅಧ್ಯಕ್ಷ ಸಂಪತ್ ಸುವರ್ಣ, ಉಜಿರೆ ಗ್ರಾ.ಪಂ.  ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಸಿವಿಲ್ ಇಂಜಿನಿಯರ್ ಸೂರ್ಯನಾರಾಯಣ, ಗ್ರಾ.ಪಂ.ಸದಸ್ಯರಾದ ಗುರುಪ್ರಸಾದ್ ಕೋಟ್ಯಾನ್, ಸವಿತಾ, ನಾಗವೇಣಿ ಉಪಸ್ಥಿತರಿದ್ದರು. ಪ್ರಜ್ಙಾ ಓಡಿನ್ನಾಳ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಸುರೇಶ್ ಮಾಚಾರ್ ಸ್ವಾಗತಿಸಿದರು. ಮನೋಜ್ ಕುಂಜರ್ಪ ಇದ್ದರು.

Post Comment

ಟ್ರೆಂಡಿಂಗ್‌

error: Content is protected !!