ಬೆಳ್ತಂಗಡಿ ತಾಲೂಕಿನ ವಿವಿಧ, ರಸ್ತೆ , ಸೇತುವೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ, ರಸ್ತೆ , ಸೇತುವೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ : ಶಾಸಕ ಹರೀಶ್ ಪೂಂಜ

Share
IMG-20250102-WA0001 ಬೆಳ್ತಂಗಡಿ ತಾಲೂಕಿನ ವಿವಿಧ, ರಸ್ತೆ , ಸೇತುವೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ :      ಶಾಸಕ ಹರೀಶ್ ಪೂಂಜ

ಪೊಯ್ಯ – ಉಳಿಯ, ಕಂಚಿನಡ್ಕ – ಮುರ ರಸ್ತೆಯೂ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳಿಗೆ ಅನುದಾನ ಬಿಡುಗಡೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆಗಳಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಪ್ರದೇಶಗಳ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ – ರೂ.4.00 ಕೋಟಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ – ತೋಟತ್ತಾಡಿ – ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.2.00 ಕೋಟಿ, ಪೊಯ್ಯ – ಉಳಿಯ – ಕಂಚಿನಡ್ಕ – ಮುರವರೆಗಿನ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ ಬೆಳ್ತಂಗಡಿ ತಾಲೂಕಿನ ನಾರಾವಿ – ಪಾಣಾಲು – ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ ಹಾಗೂ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ – ರೂ.3.75 ಕೋಟಿ ಬೆಳ್ತಂಗಡಿ ತಾಲೂಕಿನ ಉಜಿರೆ – ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ – ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆ ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Previous post

ಬೆಳ್ತಂಗಡಿಯಲ್ಲಿ ಮುಗಿಯದ ಚರಂಡಿ’ಇಸಂ’….! ಸಾಮಾನ್ಯ ಸಭೆಯಲ್ಲಿ ಮಹತ್ವದ ನಿರ್ಣಯ

Next post

ರೈತರ ತುರ್ತು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ : ಆಳುವವರ ರೈತ ವಿರೋಧಿ ನೀತಿ ವಿರುದ್ಧ ಖಂಡನೆ, ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

Post Comment

ಟ್ರೆಂಡಿಂಗ್‌