ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ಕು.ದಿಯಾ ಕೋಟ್ಯಾನ್ ಉನ್ನತ ಶ್ರೇಣಿ ಉತ್ತೀರ್ಣ
ಬೆಳ್ತಂಗಡಿ : ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು ಬೆಳ್ತಂಗಡಿ ವಾಣಿ ಆಂಗ್ಲಮಾಧ್ಯಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಹಾಗೂ
ಪತ್ರಕರ್ತ ಮನೊಹರ್ ಬಳಂಜ, ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಗಳ ಪುತ್ರಿಯಾಗಿದ್ದಾಳೆ.
Post Comment