“ಆಪರೇಷನ್ ಸಿಂಧೂರ್ ಗೆ ಧಿಕ್ಕಾರ” ಮಂಗಳೂರಿನ ಕಾಲೇಜ್ ವಿದ್ಯಾರ್ಥಿನಿ ಪೋಸ್ಟ್..!

Belthangady : ಭಾರತೀಯ ಸೇನೆ ಅಪರೇಷನ್ ‘ಸಿಂಧೂರ್ ಹೆಸರಿನಲ್ಲಿ ಉಗ್ರರನ್ನು ಮಟ್ಟ ಹಾಕಿದ ಕಾರ್ಯಾಚರಣೆಯನ್ನು
ಇಡೀ ದೇಶವೇ ಸಂಭ್ರಮಿಸಿದೆ, ಆದರೆ ಇದೇ ವೇಳೆಗೆ ಬೆಳ್ತಂಗಡಿಯ ವಿದ್ಯಾರ್ಥಿನಿಯೋರ್ವಳು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ
“ಆಪರೇಷನ್ ಸಿಂಧೂರ್ ಗೆ ಧಿಕ್ಕಾರ” ಪೋಸ್ಟ್ ದೇಶ ವಿರೋಧಿ ಪೋಸ್ಟ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದ್ದು ಅಚ್ಚರಿ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು
ನಿವಾಸಿ ಸುಷ್ಮಾ (ಹೆಸರು ಬದಲಿಸಲಾಗಿದೆ) ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್
“ಧಿಕ್ಕಾರ ಅಪರೇಷನ್ ಸಿಂಧೂರ್(Dhikkara Operation sindura)” ಎಂದು ಮೇ 08 (ಗುರುವಾರ) ಪೋಸ್ಟ್ ಹಾಕಿದ ಬೆನ್ನಲ್ಲೇ ವಿದ್ಯಾರ್ಥಿನಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು ಇದನ್ನು ಗಮನಿಸಿದ ವಿದ್ಯಾರ್ಥಿನಿ ಕೂಡಲೇ ಈ ಪೋಸ್ಟ್ ಡಿಲೀಟ್ ಮಾಡಿ ತನ್ನ ಪ್ರಮಾದವನ್ನು ತಿದ್ದಿಕೊಂಡಿದ್ದಾಳೆ.
ಈಕೆ ‘ಆಪರೇಷನ್ ಸಿಂಧೂರ್’ ನಡೆಸಿದ್ದು ಪಾಕಿಸ್ತಾನ ಎಂದು ತಪ್ಪು ತಿಳಿದು ಮಾಹಿತಿ ಕೊರತೆಯಿಂದ ಈ ಪೋಸ್ಟ್ ಹಾಕಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ.
ಆದರೆ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿನಿ
ʼನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕುʼ “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ…ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದ್ದು ಕತ್ತಲು…ಎಲ್ಲೆಲ್ಲೂ ಕತ್ತಲು..!#dikkraoperationsindura ಹ್ಯಾಷ್ ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾಳೆ.
ಪೋಸ್ಟ್ ವೈರಲ್ ಆದ ಬೆನ್ನಲ್ಲೇ “ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ ಗೌರವವಿದೆ. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ. ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ. ಯಾವುದೇ ಯುದ್ಧ ಆದಾಗ ಮಡಿಯುವವರು ಒಂದೆಡೆಯಾದರೆ ಆಯಾ ದೇಶದ ಬಹುತೇಕರು ವಿವಿಧ ಕಾರಣಗಳಿಗಾಗಿ ನೋವು ಅನುಭವಿಸುವಂತಾಗುತ್ತದೆ. ಭಾರತದ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳದಿರಲಿ, ಶಾಂತಿ, ಸೌಹಾರ್ದ ನೆಲೆಸಲಿ. ಭಯೋತ್ಪಾದನೆ ನಿರ್ಮೂಲನೆಯಾಗಲಿ.
ಸಾವು ನೋವು ಇಲ್ಲದಾಗಲಿ ಎನ್ನುವುದಷ್ಟೇ ನನ್ನ ಉದ್ದೇಶʼ ಎಂದು ರೇಷ್ಮಾ ಹೊಸದಾಗಿ ಪೋಸ್ಟ್ ಮಾಡಿದ್ದಾರೆ. ವಿದ್ಯಾರ್ಥಿನಿಯ
ಪೋಸ್ಟ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸುವಂತೆ ಒತ್ತಡ ಹೇರಲಾಗಿದ್ದು ಕುತೂಹಲ ಮೂಡಿಸಿದೆ.



Post Comment