ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯಿಂದ ರಕ್ಷಿತ್ ಶಿವರಾಂ ಅವರಿಗೆ ಗೌರವಾರ್ಪಣೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯಿಂದ ರಕ್ಷಿತ್ ಶಿವರಾಂ ಅವರಿಗೆ ಗೌರವಾರ್ಪಣೆ

Share
IMG-20250526-WA0005-1024x461 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯಿಂದ  ರಕ್ಷಿತ್ ಶಿವರಾಂ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ : ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಸೋಮವಾರ ಅಭಿನಂದಿಸಲಾಯಿತು.

ಬೆಳ್ತಂಗಡಿ ತಾಲೂಕು ಕೊಕ್ಕಡ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ರಚನೆಗೆ ಸಹಕಾರ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಸಮಿತಿಯ ಪರವಾಗಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ನೇತೃತ್ವದಲ್ಲಿ ಗೌರವಾರ್ಪಣೆ ಸಲ್ಲಿಸಿದರು.

ಈ ಸಂದರ್ಭ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್. ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಗಣೇಶ್ ಕಾಶಿ ಕೊಕ್ಕಡ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ, ಪ್ರಶಾಂತ್ ಮಚ್ಚಿನ, ಉಪಸ್ಥಿತರಿದ್ದರು.

Post Comment

ಟ್ರೆಂಡಿಂಗ್‌