ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಜಿಲ್ಲೆಯ 36 ಮಂದಿಯ ಗಡಿಪಾರಿಗೆ ಕಾನೂನು ಪ್ರಕ್ರಿಯೆ ಆರಂಭಿಸಿದ ದ.ಕ. ಪೊಲೀಸ್

ಬೆಳ್ತಂಗಡಿ : ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ತಾಲೂಕಿನ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಬಗ್ಗೆ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿದ್ದು ಈ ಕುರಿತಂತೆ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟನೆ ಬಿಡುಗಡೆಗೊಳಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾರ್ ಎಂಬವರನ್ನು ಪುಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕೀರ್ ಎಂಬವರೂ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಒಟ್ಟು 36 ಮಂದಿಯನ್ನು ದ.ಕ. ಜಿಲ್ಲೆಯಿಂದ ಗಡಿಪಾರು ಮಾಡುವ ಬಗ್ಗೆ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ದ.ಕ. ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
Post Comment