ಬೆಳ್ತಂಗಡಿ ಶ್ರೀರಾಮ್ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಬಹುಕೋಟಿ ಲೂಟಿಕೋರರ ಆಸ್ತಿ ಜಪ್ತಿಗೆ ಆದೇಶ

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಳ್ತಂಗಡಿ ಈ ಸಂಘದ 2023-24 ರ ಸಾಲಿನ ಲೆಕ್ಕಪರಿಶೋಧನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಬಗ್ಗೆ ಸಹಕಾರಿ ಸಂಘದ ಉಪ ನಿಬಂಧಕರು 2023-24 ರಲ್ಲಿ ಜವಬ್ದಾರಿಯಲ್ಲಿದ್ದ 15 ಮಂದಿ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸಿದ್ದು, ಸೊಸೈಟಿಯ ಜವಾಬ್ದಾರಿ ನಿರ್ವವಹಿಸಿದ್ದ 9ಮಂದಿಯ ಆಸ್ತಿಯನ್ನು ತೀರ್ಪು ಪೂರ್ವ ಜಪ್ತಿ ಮಾಡಿ ಜೂ.5 ರಂದು ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯ ಆದೇಶ ಮಾಡಿ ನೋಟಿಸ್ ಜಾರಿ ಮಾಡಲಾಗಿದೆ.
ಸೊಸೈಟಿ ಅಧ್ಯಕ್ಷ ಸಿ.ಹೆಚ್.ಪ್ರಭಾಕರ, ನಿರ್ದೇಶಕರಾದ ವಿಶ್ವನಾಥ ಆರ್.ನಾಯಕ್, ವಿಶ್ವನಾಥ, ಪ್ರಮೋದ್.ಆರ್. ನಾಯಕ್, ಪಿ.ಜಗನ್ನಾಥ್, ರತ್ನಾಕರ ಶೇರಿಗಾರ್, ನಯನ ಶಿವಪ್ರಸಾದ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಚಂದ್ರಕಾಂತ್, ಸಿಬ್ಬಂದಿ ಸರಿತಾ ಸೇರಿ ಒಂಭತ್ತು ಮಂದಿಗೆ ಸಹಕಾರ ಸಂಘಗಳ ಉಪ ನಿಬಂಧಕರು ದ. ಕ. ಜಿಲ್ಲೆ ಮಂಗಳೂರು ನ್ಯಾಯಾಲಯದಿಂದ ಜೂ5ರಂದು ನೋಟೀಸ್
ನೀಡಲಾಗಿದೆ.

ಒಂದು ವೇಳೆ ಜಪ್ತಿ ಪೂರ್ವ ಜಪ್ತಿ ಆದೇಶವವಾನ್ನು ತೆರವುಗೊಳಿಸಲು ಬಯಸಿದಲ್ಲಿ ಜೂ.20 ರ ಒಳಗೆ ರೂ.30,45,24,278 (ಮೂವತ್ತು ಕೋಟಿ ನಲವತ್ತೈದು ಲಕ್ಷದ ಇಪ್ಪತೈದು ಸಾವಿರದ ಇನ್ನೂರ ಇಪ್ಪತ್ತೆಂಟು) ನಗದು ಭದ್ರತೆಯಾಗಿ ಈ ನ್ಯಾಯಾಲಯದ ಪಿ.ಡಿ. ಖಾತೆಯಲ್ಲಿ ನಿಗದಿತ ಅವಧಿಯೊಳಗೆ ಠೇವಣಿ ಇರಿಸತಕ್ಕದ್ದು ಇಲ್ಲವಾದರೆ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಸಹಕಾರ ಸಂಘಗಳ ಉಪನಿಬಂಧಕರು, ದ.ಕ. ಜಿಲ್ಲೆ, ಮಂಗಳೂರು ಇವರು ನೀಡಿರುವ ಆದೇಶದಲ್ಲಿ ಚರಾಸ್ತಿಯನ್ನು ಷರತ್ತಿಗೊಳಪಟ್ಟು ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ ಹೊರಡಿಸಿರುತ್ತೇನೆ.
ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿ ಅಥವಾ ಅತಿಕ್ರಮಿಸಿ ಯಾರಾದರೂ ಜಪ್ತಿಗೊಳಪಟ್ಟ ಈ ಕೆಳಕಂಡ ಚರಾಸ್ತಿಯನ್ನು ಖರೀದಿಸಿದ್ದಲ್ಲಿ ಅಂತಹ ಹೊಣೆಗಾರಿಕೆಗೆ ಖರೀದಿಸಿದವರೇ ಸಂಪೂರ್ಣ ಹೊಣೆಗಾರರು ಆಗಿರುತ್ತಾರೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.















Post Comment