ಸೌಹಾರ್ದತೆಗೆ ಧಕ್ಕೆ ತರುವ ಸಂದೇಶ ಪ್ರಸಾರ: ಪ್ರಕರಣ ದಾಖಲು
ಬೆಳ್ತಂಗಡಿ : ಇಲ್ಲಿನ ಉಜಿರೆ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಕೋಮುಗಳ ನಡುವಿನ ಕೋಮು ಸೌರ್ದಾತೆ
ಕೆಡಿಸುವ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನ ವಿರುದ್ನ ಬೆಳ್ತಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದ ಫೇಸ್ಬುಕ್ ನ ‘ಕುಲುಮೆ’ ಎಂಬ ಗ್ರೂಪ್ ನಲ್ಲಿ Ayshu Aysha ಎಂಬ ಫೇಸ್ಬುಕ್ ಖಾತೆ ಹೊಂದಿರುವ ವ್ಯಕ್ತಿ ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳನ್ನು ಪ್ರಸಾರ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಕಲಂದರ್ ಪುತ್ತುಮೋನು (42) ಎಂಬವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.














Post Comment