ಧರ್ಮಸ್ಥಳ – ಉಜಿರೆ ಘಟನೆ ಪ್ರಕರಣ:

ಧರ್ಮಸ್ಥಳ – ಉಜಿರೆ ಘಟನೆ ಪ್ರಕರಣ:

Share

ಯೂಟ್ಯೂಬರ್ಸ್ / ಚಾನೆಲ್ ವರದಿಗಾರರ ಮೇಲೆ ಹಲ್ಲೆ
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ

ಯೂಟ್ಯೂಬರ್ಸ್ / ಚಾನೆಲ್ ವರದಿಗಾರರ ಮೇಲೆ ಹಲ್ಲೆ
ಪೊಲೀಸ್ ಕರ್ತವ್ಯಕ್ಕೆ ಅಡ್ಡಿ

IMG-20231116-WA0027-3-1024x687 ಧರ್ಮಸ್ಥಳ - ಉಜಿರೆ ಘಟನೆ ಪ್ರಕರಣ:

ಧರ್ಮಸ್ಥಳ – ಬೆಳ್ತಂಗಡಿ ಠಾಣೆಗಳಲ್ಲಿ 7 ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಬುಧವಾರ ಸಂಜೆ ಯೂಟ್ಯೂಬರ್ಸ್‌ಗಳ ಮೇಲೆ ನಡೆದ ಹಲ್ಲೆಯ ವಿಚಾರ ತಿಳಿದು ಸ್ಥಳಕ್ಕೆ ಬಂದ ಪ್ರಮೋದ್‌ ಕುಮಾರ್ ಶೆಟ್ಟಿ (42) ಎಂಬವರಿಗೆ, ಸ್ಥಳದಲ್ಲಿ ಸೇರಿದ್ದ ಸುಮಾರು 30ರಿಂದ 40 ಜನರ ಗುಂಪು ಅವ್ಯಾಚವಾಗಿ‌ ಬೈದು, ಹಲ್ಲೆ ನಡೆಸಿದ್ದು ಸ್ಥಳದಲ್ಲಿದ್ದ ಎರಡು ವಾಹನಗಳಿಗೆ ಹಾಗೂ ಕ್ಯಾಮರಾಕ್ಕೆ ಹಾನಿಗೊಳಿಸಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2025 ಕಲಂ: 189(2), 191(2), 115(2), 110, 324(3),  352, 351(2) ಜೊತೆಗೆ 190 ಬಿಎನ್‌ ಎಸ್‌ ರಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಿವಾಸಿ ಹರೀಶ್ ಆರ್  (34) ಎಂಬವರ ದೂರಿನಂತೆ, ಏಷಿಯನೆಟ್ ಸುವರ್ಣ ಎಂಬ ಖಾಸಗಿ ಚಾನೆಲ್‌ ನ ಕ್ರೈಂ ರಿಪೋರ್ಟರ್ ಕೆಲಸ ಮಾಡಿಕೊಂಡಿದ್ದು
ಆಗಸ್ಟ್ 6ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ನಡೆದ ಹಲ್ಲೆ ಘಟನೆಯ ಗಾಯಾಳುಗಳ ಬಗ್ಗೆ ವರದಿ ಮಾಡಲು ಉಜಿರೆ ಬೆನಕ ಆಸ್ಪತ್ರೆಯ ಬಳಿ ತೆರಳಿದ್ದು ಈ ಸಂದರ್ಭ ಸ್ಥಳದಲ್ಲಿದ್ದ 
ಗಿರೀಶ್ ಮಟ್ಟಣ್ಣನವರ್ ಎಂಬವರೊಂದಿಗೆ ವಿಡಿಯೋ ಬೈಟ್ ಕೊಡುವಂತೆ ಕೇಳಿದಾಗ, ಏಕಾಏಕಿ ಬೈದಿರುತ್ತಾರೆ.
ಸ್ಥಳದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ  ಮತ್ತು ಅವರೊಂದಿಗಿದ್ದ ಇತರರು ಹಲ್ಲೆ ನಡೆಸಿ ಅವ್ಯಾಚವಾಗಿ ಬೈದಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೋರ್ವ ಆರೋಪಿ ಸಮೀರ್ ಯೂಟ್ಯೂಬರ್ಸ್ ಎಂಬಾತನು ಜೀವ ಬೆದರಿಕೆ ಹಾಕಿರುತ್ತಾನೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 75/2025 ಕಲಂ: 189(2), 191(1) (2), 115(2), 351(2), 352 ಜೊತೆಗೆ 190 ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ (28) ಎಂಬವರ ದೂರಿನಂತೆ ಆಗಸ್ಟ್ 6ರಂದು ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಗುಂಪಿನಿಂದ ಹಲ್ಲೆಗೊಳಗಾದ ಯೂಟ್ಯೂಬರ್ ಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕಾ ಆಸ್ಪತ್ರೆಗೆ ವಾಹನವೊಂದರಲ್ಲಿ ಕರೆತಂದಿದ್ದು ಈ ಸಂದರ್ಭ ಗಾಯಾಳುಗಳನ್ನು ನೋಡಲು ಬಂದ ಸುವರ್ಣ ನ್ಯೂಸ್‌ ವರದಿಗಾರ ಹಾಗೂ ಕ್ಯಾಮರಾಮೆನ್‌
ಮಹೇಶ್‌ ಶೆಟ್ಟಿ ತಿಮರೋಡಿ  ಹಾಗೂ ಗಿರೀಶ್‌ ಮಟ್ಟಣ್ಣನವರ್‌ ರವರನ್ನು ತಡೆದು ನಿಲ್ಲಿಸಿ ಬೈಟ್‌ ಕೊಡುವಂತೆ  ಒತ್ತಾಯಿಸಿದ್ದು ಈ ಬಗ್ಗೆ ನಿರಾಕರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ತಳ್ಳಾಟ ನಡೆಸಿರುತ್ತಾರೆ.
ಈ ಘಟನೆ ನಡೆದು ಕೆಲಹೊತ್ತಿನಲ್ಲಿ ಸುವರ್ಣ ಸುದ್ದಿ ವಾಹಿನಿಯಲ್ಲಿ  ಅಜಿತ್‌ ಹನುಮಕ್ಕನವರ್‌  ಎನ್ನುವ ನ್ಯೂಸ್‌ ಆಂಕರ್ “ಸುವರ್ಣ ನ್ಯೂಸ್‌  ವರದಿಗಾರರ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 76/2025 ಕಲಂ:126(2), 296, 351   ಜೊತೆಗೆ 3(5) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.

ಆಗಸ್ಟ್ 06ರಂದು ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಉಜಿರೆಯ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, ಸ್ಥಳದಲ್ಲಿ ಸುಮಾರು 50 ರಿಂದ100 ಮಂದಿ ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ, ಘೋಷಣೆಗಳನ್ನು ಕೂಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೂರ್ವಾನುಮತಿ ಪಡೆಯದೇ ಅಕ್ರಮಕೂಟ ಸೇರಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 77/2025 ಕಲಂ:Sec 189(2)r/ W 190 BNS ಬಿಎನ್ಎಸ್ -2023 ರಂತೆ ಸುಮೋಟೊ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Previous post

ಧರ್ಮಸ್ಥಳದಲ್ಲಿ ಕರ್ತವ್ಯನಿರತ ಯೂಟ್ಯೂಬರ್ಸ್‌ ಮೇಲೆ ಗೂಂಡಾಗಿರಿ ಬೆನ್ನಲ್ಲೇ ಉಜಿರೆಯಲ್ಲಿ ನ್ಯೂಸ್ ಚಾನೆಲ್ ವರದಿಗಾರನ ಮೇಲೆ ದಾಳಿ : ಪ್ರಕರಣ ದಾಖಲು

Next post

ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್ಸ್‌ ಮೇಲೆ ಗೂಂಡಾಗಿರಿ : ಓರ್ವ ಆರೋಪಿ ಬಂಧನ

Post Comment

ಟ್ರೆಂಡಿಂಗ್‌

error: Content is protected !!