ಉಪ್ಪಿನಂಗಡಿ ಜ್ಞಾನ ಭಾರತಿ ಶಾಲಾ ಶಿಕ್ಷಕ-ರಕ್ಷಕ ಸಭೆ: ಸಾಧಕರಿಗೆ ಸನ್ಮಾನ

ಉಪ್ಪಿನಂಗಡಿ : ಇಲ್ಲಿನ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆಯು ನವೆಂಬರ್ 29ರಂದು ನಡೆಯಿತು.
ಈ ಸಂದರ್ಭ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ, ಉಬರ್ ಡೊನರ್ಸ್ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಶಬೀರ್ ಕೆಂಪಿ ಅವರಿಗೆ ಸನ್ಮಾನಿಸಲಾಯಿತು.
ಪುತ್ತೂರು ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಪತ್ರಕರ್ತ ಯು. ಎಲ್. ಉದಯ ಕುಮಾರ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಜ್ಞಾನ ಭಾರತಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಪ್ರಮುಖ ಅಬ್ದುಲ್ಲ ರಾವೂಫ್ ಯು ಟಿ., ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಇಕ್ಬಾಲ್ ಜೋಗಿಬೆಟ್ಟು, ಉಪಾಧ್ಯಕ್ಷರಾದ ಶುಕೂರು ಮೆದ್ರಾಬೆಟ್ಟು, ಕೋಶಾಧಿಕಾರಿ ಮಜೀದ್ ಮಠ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪ್ರಾಂಶುಪಾಲರಾದ ಇಬ್ರಾಹಿಂ ಖಲೀಲ್ ಹೆಂತಾರ್ ಮತ್ತು ಇಲ್ಯಾಸ್ ಕರಾಯ, ಸಿದ್ದಿಕ್ ಹ್ಯಾಪಿ ಟೈಮ್ಸ್ ಉಪಸ್ಥಿತತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಗತಿಯ ಕುರಿತು ಹಲವು ವಿಚಾರಗಳನ್ನು ಚರ್ಚಿಸಲಾಯಿತು.
















Post Comment