ಮಾ:9ಕ್ಕೆ ಬೆಳ್ತಂಗಡಿಯಲ್ಲಿ ಗ್ಯಾರಂಟಿ ಸಮಾವೇಶ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿ

ಮಾ:9ಕ್ಕೆ ಬೆಳ್ತಂಗಡಿಯಲ್ಲಿ ಗ್ಯಾರಂಟಿ ಸಮಾವೇಶ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿ

Share
WhatsApp-Image-2024-03-01-at-3.00.55-PM-300x140 ಮಾ:9ಕ್ಕೆ ಬೆಳ್ತಂಗಡಿಯಲ್ಲಿ  ಗ್ಯಾರಂಟಿ ಸಮಾವೇಶ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಉಪಸ್ಥಿತಿ

ಬೆಳ್ತಂಗಡಿ : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲುಮಾ.9 ರಂದು ಗ್ಯಾರಂಟಿ ಸಮಾವೇಶವನ್ನು ಆಯೋಜಿಸಿರುವ ಬಗ್ಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ಮಾ1ರಂದು ಪತ್ರಿಕಾಗೋಷ್ಠಿ ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ತನ್ನ ಚುನಾವಣಾ ಸಂದರ್ಭದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು, ಬಹುಶಃ ಕರ್ನಾಟಕದ ಇತಿಹಾಸದಲ್ಲಿ ಭಾರತ ದೇಶದಲ್ಲಿ ದಾಖಲೆ ನಿರ್ಮಿಸಿದ ಯೋಜನೆ ಯಾವುದಾದರೂ ಇದ್ದರೆ ಅದು ಈ ಗ್ಯಾರಂಟಿ ಯೋಜನೆ, ಅಂತಹ ಒಂದು ಯೋಜನೆಯನ್ನು ನುಡಿದಂತೆ ನಡೆದ ಸರ್ಕಾರ ಅದು ನಮ್ಮ ಕಾಂಗ್ರೆಸ್‌ ಸರ್ಕಾರ ಎಂದರು.ಅರ್ಹರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು
ಮಾ.5ರಂದು ಬೆಳಿಗ್ಗೆ 10.30 ಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜಿಲ್ಲೆಯ ಎಲ್ಲಾ ಶಾಸಕರನ್ನೂ ಆಹ್ವಾನಿಸಲಾಗುತ್ತದೆ. ತಾಲೂಕಿನ ಜನಪ್ರತಿನಿಧಿಗಳು,
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಬೆಳಿಗ್ಗೆ 10: 30 ಯಿಂದ 2 ಗಂಟೆಯ ವರೆಗೆ ನಡೆಯಲಿದ್ದು, ಯಾರಿಗೆ ಈ ಯೋಜನೆ ಸೌಲಭ್ಯ ತಲುಪಿಲ್ಲ, ಅವರೆಲ್ಲ ಈ ಯೋಜನೆಗೆ ಬರಬೇಕು, ಕುಂದು ಕೋರತೆಗಳ ಪರಿಶೀಲನೆ ಹಾಗೂ ಸ್ಪಂದನೆಗೆ ಪ್ರತ್ಯೇಕವಾದ ಕೌಂಟರ್ ಗಳು ಇರುತ್ತದೆ. ಯೋಜನೆಗೆ ಸಂಬಂಧ ಪಟ್ಟ ಯಾವುದೇ ಸಮಸ್ಯೆಗಳಿಗೂ ಸ್ಥಳದಲ್ಲೇ ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಗೃಹ ಜ್ಯೋತಿ ಜು.23 ರಿಂದ ಜ. 24 ರ ವರೆಗೆ 66 ಸಾವಿರ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ ಸರಿ ಸುಮಾರು 48 ಸಾವಿರ ಕುಟುಂಬಗಳು ಫಲಾನುಭವಿಗಳಾಗಿದ್ದಾರೆ.ರೇಷನ್ ಕಾರ್ಡ್ ಸಮಸ್ಯೆ, ಆಧಾ‌ರ್ ಕಾರ್ಡ್ ಜೋಡಣೆ, ಕೆವೈಸಿ ಅಪ್ಲೋಡ್ ಮಾಡುವ ಕೆಲಸ ಪ್ರತ್ಯೇಕವಾದ ಕೌಂಟರ್ ಗಳು ಇರುತ್ತದೆ.
ರೇಷನ್ ಕಾರ್ಡ್ ಸಮಸ್ಯೆ, ಆಧಾ‌ರ್ ಕಾರ್ಡ್ ಜೋಡಣೆ, ಕೆವೈಸಿ ಅಪ್ಲೋಡ್ ಮಾಡುವ ಕೆಲಸ ಆ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಬೆಳ್ತಂಗಡಿ ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸುದರ್ಶನ್ ಆರಂಬೋಡಿ ಉಪಸ್ಥಿತರಿದ್ದರು.

Post Comment

ಟ್ರೆಂಡಿಂಗ್‌