ವೇಣೂರು ಗ್ರಾ.ಪಂ. ಪರಿಶಿಷ್ಟರ ವಿಶೇಷ ಗ್ರಾಮಸಭೆಗೆ ಇಲಾಖಾಧಿಕಾರಿಗಳ ಗೈರು!

ವೇಣೂರು: ಮಹಾತ್ಮ ಗಾಂಧಿ ವೇಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕುಂದುಕೊರತೆಗಳನ್ನು ಆಲಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ವಿಶೇಷ ಗ್ರಾಮ ಸಭೆಯು, ಸಂಬಂಧಪಟ್ಟ ಅಧಿಕಾರಿಗಳ ಗೈರುಹಾಜರಿ ಹಾಗೂ ಪಂಚಾಯಿತಿಯ ನಿರ್ಲಕ್ಷ್ಯದಿಂದಾಗಿ ಮುಂದೂಡಲ್ಪಟ್ಟಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ತಮ್ಮ ಸಮಸ್ಯೆಗಳನ್ನು ಮಂಡಿಸಲು ಗ್ರಾಮಸ್ಥರು ಸಭೆಗೆ ಆಗಮಿಸಿದ್ದರೂ, ಅಗತ್ಯ ಅಧಿಕಾರಿಗಳು ಹಾಜರಿರದ ಕಾರಣ ಸಭೆ ನಡೆಸಲು ಸಾಧ್ಯವಾಗಿಲ್ಲ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳ ಬಗ್ಗೆ ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮುಂದೂಡಲ್ಪಟ್ಟ ಸಭೆಯನ್ನು ಶೀಘ್ರವಾಗಿ ಮರು ಆಯೋಜಿಸಿ, ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಉಮೇಶ್ ಎನ್., ಪಿಡಿಒ ಪ್ರಕಾಶ್ ಎಸ್., ಕಾರ್ಯದರ್ಶಿ ವನಜ ಉಪಸ್ಥಿತರಿದ್ದರು.
















Post Comment