ಮೈರೋಳ್ತಡ್ಕ ಶಾಲಾ ಅಮೃತಮಹೋತ್ಸವ ಪ್ರಯುಕ್ತ ಆಧಾರ್ ನೋಂದಣಿ/ ತಿದ್ದುಪಡಿ ಕಾರ್ಯಕ್ರಮ

ಬಂದಾರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಮೈರೋಳ್ತಡ್ಕ- ಬಂದಾರು ಇದರ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಆಗಸ್ಟ್ 30ನೇ ಭಾನುವಾರ ನೆರವೇರಿತು.
ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುರುಪ್ರಸಾದ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ಅಂಚೆ ವಿಭಾಗದ ಉಪ ಅಧೀಕ್ಷರಾದ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.
ಆಧಾರ್ ನೋಂದಣಿ ಮತ್ತು ತಿದ್ದುಪಡಿ ಪ್ರಕ್ರಿಯೆಯಲ್ಲಿ
ನೂರಾರು ಮಂದಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಊರ ಹಿರಿಯರಾದ ಶ್ರೀಪತಿ ರಾವ್
ಶಾಲಾ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ಎನ್.
ಸಹ ಶಿಕ್ಷಕರು, ಎಸ್. ಡಿ.ಎಂ.ಸಿ, ಸದಸ್ಯರು ಹಾಗೂ ಪೋಷಕರು ಪಾಲ್ಗೊಂಡರು.













Post Comment